ಗಣೇಶೋತ್ಸವ: ಸರ್ಕಾರ ಹೊರಡಿಸಿದ ಮಾರ್ಗಸೂಚಿ ಅಂಶಗಳ ಪಾಲನೆಗೆ ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಸೂಚನೆ

ರಾಯಚೂರು: ಅ,19-ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಗೌರಿ-ಗಣೇಶ ಹಬ್ಬದ ಸಮಯದಲ್ಲಿ ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಣೆ ಕುರಿತು ಸರ್ಕಾರ ಹೊರಡಿಸಿದ ಮಾರ್ಗ ಸೂಚಿಅಂಶಗಳನ್ನು ಪಾಲನೆ ಮಾಡುವಂತೆ ಜಿಲ್ಲಾಡಳಿತವು ಕಟ್ಟುನಿಟ್ಟಿನ ಸೂಚನೆ ನೀಡಿದೆ.

Aug 20, 2025 - 08:27
 0  30
ಗಣೇಶೋತ್ಸವ: ಸರ್ಕಾರ ಹೊರಡಿಸಿದ ಮಾರ್ಗಸೂಚಿ ಅಂಶಗಳ ಪಾಲನೆಗೆ ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಸೂಚನೆ
ಜಿಲ್ಲಾಧಿಕಾರಿಗಳಾದ ನಿತೀಶ್ ಕೆ

ಸಾರ್ವಜನಿಕರು ಸಾಧ್ಯವಾದಷ್ಟು ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ (ಪಿ.ಓ.ಪಿ)ಅಥವಾ ಲೋಹಮಿಶ್ರಿತ ಬಣ್ಣಲೇಪಿತದಂತಹಮೂರ್ತಿಗಳ ಬದಲಿಗೆ ನೈಸರ್ಗಿಕ ಬಣ್ಣಗಳಿಂದ ತಯಾರಿಸಿರುವ ಮಣ್ಣಿನ ಚಿಕ್ಕ ಮೂರ್ತಿಗಳನ್ನು ಖರೀದಿಸಲು ನಿರ್ದೇಶಿಸಲಾಗಿದೆ.ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳ ಸ್ಥಾಪನೆಗೆ ಸಂಬಂಧಪಟ್ಟಂತೆ ಗಣೇಶ ಮಂಡಳಿಯವರು ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ಇಲಾಖೆಯಿಂದ ಆಗತ್ಯ ಪರವಾನಿಗೆ ಪಡೆಯುವ ಮೂಲಕ ಷರತ್ತು ಮತ್ತು ನಿಬಂಧನೆಗಳನ್ನು ಪಾಲನೆ ಮಾಡಬೇಕು.

ಹೊರ ರಾಜ್ಯದಿಂದ ತರುವ ಪ್ಲಾಸ್ಟರ್ ಆಫ್‌ ಪ್ಯಾರಿಸ್‌ನಿಂದ ಲೋಹ ಮಿಶ್ರಿತ ಬಣ್ಣ ಲೇಪಿತದಂತಹ ತಡೆಯುವ ವಿಗ್ರಹಗಳನ್ನು ಮತ್ತು ವಾಪಸ್ಸು ಕಳುಹಿಸುವ ಜವಾಬ್ದಾರಿಯನ್ನು ರಾಜ್ಯ ಅಥವಾ ಜಿಲ್ಲಾ ಗಡಿ ಭಾಗದ ಠಾಣೆ ಅಥವಾ ಚೆಕ್ ಪೋಸ್ಟನ ಅಧಿಕಾರಿಗಳಿಗೆ ನೀಡಲಾಗಿದೆ. ಜಿಲ್ಲೆಯ ವಾಣಿಜ್ಯ ತೆರಿಗೆ ಹಾಗೂ ಸಾರಿಗೆ ಇಲಾಖೆ ಅಥವಾ ಪೊಲೀಸ್ ಇಲಾಖೆಗಳು ಕಟ್ಟುನಿಟ್ಟಿನ ಕ್ರಮವಹಿಸಬೇಕು.

ಸ್ಥಳೀಯ ಸಂಸ್ಥೆಗಳು ಪ್ಲಾಸ್ಟರ್ ಆಫ್ ಪ್ಯಾರಿಸನಿಂದ ಅಥವಾ ಲೋಹ ಮಿಶ್ರಿತ ಬಣ್ಣ ಲೇಪಿತ ವಿಗ್ರಹಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ವ್ಯಕ್ತಿಗಳಿಗೆ ಅತವಾ ಸಂಸ್ಥೆಗಳಿಗೆ ವ್ಯಾಪಾರ ಲೈಸನ್ಸನ್ನು ನೀಡದಿರಲು ಹಾಗೂ ಯಾವುದೇಲೈಸನ್ನನ್ನು ಪಡೆಯದೆ ಅನಧೀಕೃತವಾಗಿ ತಯಾರಿ ಅಥವಾ ಮಾರಾಟ ಮಾಡುತ್ತಿರುವ ವ್ಯಕ್ತಿ ಅಥವಾ ಸಂಸ್ಥೆಗಳ ಮೇಲೆ ತಕ್ಷಣ ಕಾನೂನುರೀತಿ ಕ್ರಮ ಜರುಗಿ ಜರುಗಿಸಬೇಕು. ಹಬ್ಬದ ಸಂದರ್ಭದಲ್ಲಿ ಪ್ಲಾಸ್ಟಿಕ್ ರಹಿತ ವಸ್ತುಗಳ ಬದಲಿಗೆ ಹೂವು ಪತ್ರಗಳಿಂದ ಅಲಂಕರಿಸಿಮೂರ್ತಿ ಪೂಜಿಸಬೇಕು.ಗಣೇಶೋತ್ಸವ: ಸರ್ಕಾರ ಹೊರಡಿಸಿದ ಮಾರ್ಗಸೂಚಿ

ಅಂಶಗಳ ಪಾಲನೆಗೆ ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಸೂಚನೆ ಗಣೇಶನ ವಿಗ್ರಹಗಳನ್ನು ಸ್ಥಳೀಯ ಸಂಸ್ಥೆಗಳು (ಮುನ್ಸಿಪಾಲಿಟಿಗಳು) ಗೊತ್ತುಪಡಿಸಿದ ತಾತ್ಕಾಲಿಕ ಟ್ಯಾಂಕ್ ಅಥವಾ ಕಟ್ಟೆ ಮತ್ತು ಕೊಳಗಳಲ್ಲಿ | ಮಾತ್ರ ವಿಸರ್ಜಿಸುವುದು ಮತ್ತು ಈ ಕುರಿತು ಸ್ಥಳೀಯ ಸಂಸ್ಥೆಗಳು ಸಾರ್ವಜನಿಕರಿಗೆ ಪತ್ರಿಕೆಗಳ/ಮಾಧ್ಯಮಗಳ ಮೂಲಕ ಮಾಹಿತಿ ನೀಡಬೇಕು. ಮೂರ್ತಿಗಳ ವಿಸರ್ಜನೆಯ ಸಮಯದಲ್ಲಿ ಹೂವು ಹಾಗೂ ಇನ್ನಿತರ ಪೂಜಾ ಸಾಮಗ್ರಿಗಳನ್ನು ಗೊತ್ತುಪಡಿಸಿದ ತಾತ್ಕಾಲಿಕ ಟ್ಯಾಂಕ್ ಅಥವಾ | ಕಟ್ಟೆ ಮತ್ತು ಕೊಳದ ದಡದಲ್ಲಿ ಇಟ್ಟಿರುವ ಬುಟ್ಟಿಗಳಲ್ಲಿ ಅಥವಾ ನಿಗಧಿತ ಜಾಗದಲ್ಲಿ ಹಾಕಬೇಕು.

ಸಾರ್ವಜನಿಕರು ಮನೆಗಳಲ್ಲಿ ಸ್ಥಾಪಿಸಲ್ಪಟ್ಟ ವಿಗ್ರಹಗಳ ವಿಸರ್ಜನೆಯ ಸಮಯದಲ್ಲಿ ಒಂದು ಬಕೆಟ್ ನೀರಿನಲ್ಲಿ ವಿಸರ್ಜಿಸುವ ಪದ್ಧತಿಯನ್ನು ರೂಢಿ ಮಾಡಿಕೊಳ್ಳುವುದು ಮತ್ತು ವಿಸರ್ಜನೆ ಮಾಡಲಾದ ಮಣ್ಣನ್ನು ಮನೆಗಳ ಆವರಣದಲ್ಲಿರುವ ಗಿಡಗಳ ಬದುಗಳಿಗೆ ಹಾಕಬೇಕು ಮೂರ್ತಿಗಳ ವಿಸರ್ಜನೆಯಾದ 24 ಗಂಟೆಗಳ ಒಳಗೆ (ತಾತ್ಕಾಲಿಕ | ಟ್ಯಾಂಕ್ ಅಥವಾ ಕಟ್ಟೆ ಮತ್ತು ಕೊಳಗಳ ಹತ್ತಿರ) ಬಿಟ್ಟು ಹೋದ ಸಾಮಗ್ರಿಗಳನ್ನು ಸ್ಥಳೀಯ ಸಂಸ್ಥೆಗಳು ಸಂಗ್ರಹಿಸಿ ಕಸ ವಿಲೇವಾರಿ | ಜಾಗಗಳಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು.

ಹಬ್ಬದ ಸಮಯದಲ್ಲಿ ಶಬ್ದ ಮತ್ತು ವಾಯು ಮಾಲಿನ್ಯ ತಡೆಗೆ | ಹೆಚ್ಚಿನ ಧ್ವನಿ ಹೊರಸೂಸುವ ಧ್ವನಿವರ್ಧಕ ಮತ್ತು ಪಟಾಕಿಗಳನ್ನು ಉಪಯೋಗಿಸಬಾರದು. ಅಲ್ಲದೆ ರಾತ್ರಿ ಸಮಯ 10 ಗಂಟೆಯಿಂದ | ಬೆಳಿಗ್ಗೆ 06 ಗಂಟೆಯವರೆಗೆ ಪರಿಸರ ಮತ್ತು ಸಾರ್ವಜನಿಕರ ಆರೋಗ್ಯ | ಹಿತದೃಷ್ಟಿಯಿಂದ ಧ್ವನಿವರ್ಧಕ ಅಥವಾ ಪಟಾಕಿಗಳ ಬಳಕೆಯನ್ನು ನಿಷೇಧಿಸಲಾಗಿದ್ದು, ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಣೆಗಾಗಿ | ಜಿಲ್ಲೆಯ ನಾಗರೀಕರು ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ಪ್ರಕಟಣೆಯಲ್ಲಿ ತಿಳಿ

ಸಿದ್ದಾರೆ.

What's Your Reaction?

like

dislike

love

funny

angry

sad

wow