ನಿವೃತ್ತ ಐಜಿಪಿ ಓಂ ಪ್ರಕಾಶ್ ಬರ್ಬರ ಹತ್ಯೆ

Apr 21, 2025 - 07:02
Apr 21, 2025 - 07:10
 0  37
ನಿವೃತ್ತ ಐಜಿಪಿ ಓಂ ಪ್ರಕಾಶ್ ಬರ್ಬರ ಹತ್ಯೆ
ನಿವೃತ್ತ ಐಜಿಪಿ ಓಂ ಪ್ರಕಾಶ್

ಬೆಂಗಳೂರು: ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್​ ಅವರ ಮೃತದೇಹ ರಕ್ತದ ಮಡುವಿನಲ್ಲಿ ಬೆಂಗಳೂರು ನಗರದ ಹೆಚ್ಎಸ್ಆರ್ ಲೇಔಟ್​ನ ಅವರ ನಿವಾಸದಲ್ಲಿ ಪತ್ತೆಯಾಗಿದೆ. ಘಟನೆ ನಡೆದಿರುವ ಮನೆಯಲ್ಲಿ ಪೊಲೀಸರು ಚಾಕುವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್​ ಅವರು ಬಿಹಾರ ಮೂಲದವರು. 1981 ಬ್ಯಾಚ್ ಐಪಿಎಸ್ ಅಧಿಕಾರಿ ಆಗಿದ್ದರು. ತಮ್ಮ ಕರ್ತವ್ಯದಲ್ಲಿ ತುಂಬಾ ಚಾಣಕ್ಷರಾಗಿದ್ದ ಓಂ ಪ್ರಕಾಶ್​ ಅವರು ಬೆಂಗಳೂರಿನ ಎರಡು ಭಯೋತ್ಪಾದಕ ಪ್ರಕರಣಗಳನ್ನು ತನಿಖೆ ಮಾಡಿದ್ದರು. 2013 ಏಪ್ರಿಲ್ 17ರಂದು ಮಲ್ಲೇಶ್ವರದ ಬಿಜೆಪಿ ಕಚೇರಿ ಬಳಿ ನಡೆದ ಸ್ಫೋಟ ಹಾಗೂ 2014 ಡಿಸೆಂಬರ್ 28 ರಂದು ಚರ್ಚ್​ ಸ್ಟ್ರೀಟ್​ನಲ್ಲಿ ನಡೆದ ಬ್ಲಾಸ್ಟ್ ಪ್ರಕರಣದಲ್ಲಿ​ ಶಂಕಿತ ಉಗ್ರರನ್ನ ಬಂಧಿಸಿದ್ದರು.

ಕೌಟುಂಬಿಕ ಕಲಹ ಹಿನ್ನೆಯಲ್ಲಿ ಈ ಕೃತ್ಯ ನಡೆದಿದೆ ಎಂದು ಹೇಳಲಾಗುತ್ತಿದೆ. ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್​ ಅವರನ್ನ ಹೆಂಡತಿಯೇ ಬರ್ಬರವಾಗಿ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಓಂ ಪ್ರಕಾಶ್ ಪತ್ನಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದರು ಅನ್ನೋ ಮಾಹಿತಿ ಲಭ್ಯವಾಗಿದೆ.

What's Your Reaction?

like

dislike

love

funny

angry

sad

wow